ಪಿ.ಚನ್ನಬಸವ ಬಾಗಲವಾಡ
ಮೂಲತಃ ರಾಯಚೂರಿನ ಸಿರವಾರ ತಾಲೂಕಿನ ಬಾಗಲವಾಡ ಗ್ರಾಮದ ಪಿ.ಚನ್ನಬಸವ ಬಾಗಲವಾಡ
ಹೈದ್ರಾಬಾದ ಕರ್ನಾಟಕ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರಾಗಿದ್ದು 25 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಎ ಪದವಿ ಪೂರೈಸಿರುವ ಇವರು 1999 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿದ್ದಾರೆ. ಹೈದ್ರಾಬಾದ ಕರ್ನಾಟಕ ಕನ್ನಡ ಪಾಕ್ಷಿಕ ಪತ್ರಿಕೆ ವ್ಯವಸ್ಥಾಪಕ ಸಂಪಾದಕರಾಗಿ, ಓ ಮೆಜಸ್ಟಿಕ್ ಪತ್ರಿಕೆ ವರದಿಗಾರರಾಗಿ,
ಸಂಯುಕ್ತ ಕರ್ನಾಟಕ ಕನ್ನಡ ದಿನಪತ್ರಿಕೆ ವರದಿಗಾರರಾಗಿ,
ಉದಯಕಿರಣ ಕನ್ನಡ ಪಾಕ್ಷಿಕ ಪತ್ರಿಕೆ ಸಂಪಾದಕರಾಗಿ,
ಕನ್ನಡ ನಾಡು ಕನ್ನಡ ದಿನಪತ್ರಿಕೆ ವರದಿಗಾರರಾಗಿ,
ಸಂಜೆವಾಣಿ ದಿನಪತ್ರಿಕೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2014 ರಿಂದ ರಾಯಚೂರು ಸಂಜೆ ಕನ್ನಡ ಸಂಜೆ ಪತ್ರಿಕೆ ಹಾಗೂ ಹೈದ್ರಾಬಾದ ಕರ್ನಾಟಕ ಕನ್ನಡ ದಿನಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ರಾಯಚೂರು ರಿಪೋರ್ಟರ್ಸ್ ಗಿಲ್ಡ್ನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Contact : 9945208017
Email ID : hknews444@gmail.com
