ಪತ್ರಕರ್ತರ ತುರ್ತು ನಿಧಿ

admin

ಹಿರಿಯ ಪತ್ರಕರ್ತ ದಿ. ಸೈಯದ್ ಅಶ್ರಫ್ ಕುಟುಂಬಕ್ಕೆ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ನಿಂದ 1 ಲಕ್ಷ ರೂ. ನೆರವು

ರಿಪೋರ್ಟರ‌್ಸ್ ಗಿಲ್ಡ್ ಕಾರ್ಯ ಶ್ಲಾಘನೀಯ – ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ರಾಯಚೂರು, ಫೆ.16: ಇತ್ತೀಚೆಗೆ ನಿಧನರಾದ ರಾಯಚೂರಿನ ಹಿರಿಯ ಪತ್ರಕರ್ತ ಸೈಯದ್ ಅಶ್ರಫ್ ಅವರ ಕುಟುಂಬಕ್ಕೆ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್‌ನ ಪತ್ರಕರ್ತರ ತುರ್ತು ನಿಧಿಯಿಂದ 1 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು. ನಗರದ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್ ‌ನ‌‌ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಮೃತರ ಕುಟುಂಬಕ್ಕೆ 1 ಲಕ್ಷ…

ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆ

  ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆ ರಾಯಚೂರು ಜ21: ವಿಜ್ಞಾನ ತಂತ್ರಜ್ಞಾ‌ನ ಹಾಗೂ ಸಣ್ಣನೀರಾವರಿ ಸಚಿವ ಎನ್.ಎಸ್.ಬೋಸರಾಜುರಿಂದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮಗಳ ವೇಳಾಪಟ್ಟಿ, ಬ್ಯಾನರ್, ಪೋಸ್ಟರ್, ಬಲೂನ್, ಪಾಂಪ್ಲೆಟ್‌ಗಳು, ಪಾಸ್ ಹಾಗೂ ಸಾಮಾಜಿಕ ಜಾಲತಾಣಗಳ ಬಿಡುಗಡೆ. ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇಳಾಪಟ್ಟಿ ಬಿಡುಗಡೆ. ಈ ವೇಳೆ ಜಿಲ್ಲಾಧಿಕಾರಿ ನಿತೀಶ್ ಕೆ.‌ ಸೇರಿ ಇತರ ಅಧಿಕಾರಿಗಳು, ಹಲವಾರು…

ರಾಯಚೂರು ರಿಪೋರ್ಟರ‍್ಸ್ ಗಿಲ್ಡ್‌ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಎ.ವಸಂತಕುಮಾರ ಚಾಲನೆ

ರಾಯಚೂರು ಜ20 : ರಾಯಚೂರು ರಿಪೋರ್ಟರ‍್ಸ್ ಗಿಲ್ಡ್ ಪತ್ರಿಕಾ ಭವನದ ನವೀಕರಣ ಅತ್ಯಂತ ಅವಶ್ಯವಿದ್ದು, ಇದಕ್ಕಾಗಿ ಮೊದಲ ಹಂತದಲ್ಲಿ ನನ್ನ ಅನುದಾನದಲ್ಲಿ 10 ಲಕ್ಷ ರೂ.ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಅನುದಾನದ ಅವಶ್ಯವಿದ್ದರೆ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ವಿಧಾನ ಪರಿಷತ್ ಶಾಸಕ ಎ.ವಸಂತ ಕುಮಾರ ಹೇಳಿದರು. ಅವರು ಇಂದು ನಗರದ ರಾಯಚೂರು ರಿಪೋರ್ಟರ‍್ಸ್ ಗಿಲ್ಡ್ ಪತ್ರಿಕಾ ಭವನದ ಒಳಾಂಗಣ ನವೀಕರಣ ಕಾಮಗಾರಿಗೆ ಭೂಮಿ ಪೂಜೆ ನರೆವೇರಿಸಿ ಮಾತನಾಡಿದರು. ಕಳೆದ…

ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ: ರಾಯಚೂರು ತಂಡಕ್ಕೆ ದ್ವಿತೀಯ ಸ್ಥಾನ

ರಾಯಚೂರು/ಶಿವಮೊಗ್ಗ ಜ.19: ಶಿವಮೊಗ್ಗ ಪ್ರೆಸ್ ಟ್ರಸ್ಟ್‌ ಆಯೋಜಿಸಿದ್ದ ಅಂತರಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್ ಪತ್ರಕರ್ತರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ರಾಯಚೂರು ತಂಡ ಉತ್ತಮ ಪ್ರದರ್ಶನ ನೀಡಿ ಎರಡನೇ ಬಹುಮಾನ ಪಡೆದಿದೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್ ತಂಡ ಹಾಗೂ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್ ತಂಡ ಫೈನಲ್‌ಗೆ ತಲುಪಿದ್ದವು. ಅಂತಿಮ ಹಣಾಹಣಿಯಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತಂಡ ಗೆದ್ದು…

ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ – ರಾಜ್ಯಮಟ್ಟದ ಕವನ,ಕಥಾಸ್ಪರ್ಧೆ

ಬೆಳ್ಳಿ ಮಹೋತ್ಸವ-2026ರ ಮಾಧ್ಯಮಗೋಷ್ಠಿಯ ಮಾಹಿತಿ ಆತ್ಮೀಯ ಮಾಧ್ಯಮ ಮಿತ್ರರೇ, ರಾಯಚೂರು ರಿಪೋರ್ಟ್‌ರ್ಸ್ ಗಿಲ್ಡ್ ರಾಯಚೂರು ಬೆಳ್ಳಿ ಮಹೋತ್ಸವದ ಸಂಭ್ರಮಾಚರಣೆಯಲ್ಲಿದ್ದು ರಾಯಚೂರು ಜಿಲ್ಲೆ ಹಾಗೂ ರಾಜ್ಯದ ಎಲ್ಲಾ ಪತ್ರಕರ್ತರಿಗಾಗಿ ಕಥೆ, ಕವನ, ಲೇಖನಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಕಥೆ, ಕವನ, ಲೇಖನಗಳನ್ನ ಪ್ರತ್ಯೇಕ ಮೂರು ಪುಸ್ತಕಗಳಾಗಿ ಪ್ರಕಟಿಸಲು ನಿರ್ಧರಿಸಲಾಗಿದೆ. ಪತ್ರಕರ್ತರಿಗಾಗಿ ರಾಜ್ಯಮಟ್ಟದ ಕವನ ಹಾಗೂ ಕಥಾ ಸ್ಪರ್ಧೆ ಹಾಗೂ ರಾಯಚೂರು ಜಿಲ್ಲಾ ಪತ್ರಕರ್ತರಿಂದ ವೃತ್ತಿ ಅನುಭವದ ಲೇಖನಗಳ ಆಹ್ವಾನ ಮಾಡಲಾಗಿದೆ. ಕವನ, ಕಥೆ,…

ರಾಯಚೂರು ಜಿಲ್ಲಾ ಉತ್ಸವ ಮುಂದೂಡಿಕೆ

ರಾಯಚೂರು: ಜನವರಿ‌ 29, 30 ಮತ್ತು 31 ರಂದು ನಿಗದಿಯಾಗಿದ್ದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವನ್ನ ಫೆಬ್ರವರಿ 6,7 ಮತ್ತು 8 ಕ್ಕೆ ಮುಂದೂಡಲಾಗಿದೆ. ಜಿಲ್ಲಾಧಿಕಾರಿಗಳ ಮೌಖಿಕ ಆದೇಶ ಹಿನ್ನೆಲೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದಾರೆ.

ರಾಯಚೂರು ರಿಪೋರ್ಟರ‌್ಸ್ ಗಿಲ್ಡ್ ಕ್ಯಾಲೆಂಡರ್-2026 ಬಿಡುಗಡೆ

ರಾಯಚೂರು ಜ.15: ರಾಯಚೂರು ರಿಪೋರ್ಟರ್ಸ್ ಗಿಲ್ಡ್ ನ ವಾರ್ಷಿಕ ಕ್ಯಾಲೆಂಡರ್-2026 ನ್ನ ಹಿರಿಯ ಪತ್ರಕರ್ತ ಹಾಗೂ ಗಿಲ್ಡ್ ನ ಮಾಜಿ ಅಧ್ಯಕ್ಷರಾದ ಸುರೇಂದ್ರಾಚಾರ್ಯ ಕೊರ್ತಕುಂದ ಮತ್ತು ಹಿರಿಯ ಪತ್ರಕರ್ತ ಹಾಗೂ ಗಿಲ್ಡ್‌ನ ಸಂಸ್ಥಾಪಕ ಸದಸ್ಯರಾದ ರಘುನಾಥ ರೆಡ್ಡಿ ಮನ್ಸಲಾಪುರ ಅವರು ಬಿಡುಗಡೆಗೊಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್‌ನ ಉಪಾಧ್ಯಕ್ಷ ಎಂ. ಜಯರಾಮ ವಹಿಸಿದ್ದರು. ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷರಾದ…

ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ರ ಪೂರ್ವಭಾವಿ ಸಭೆ

ರಾಯಚೂರು ಜ.8. : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ರ ಪೂರ್ವಭಾವಿ ಸಭೆಯನ್ನು ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆಸಲಾಯಿತು. ಸಾಹಿತಿಗಳು, ಪತ್ರಕರ್ತರು, ಸಂಘ ಸಂಸ್ಥೆಗಳ ಮುಖ್ಯಸ್ಥರು, ವ್ಯಾಪಾರಸ್ಥರು, ಬುದ್ದಿಜೀವಿಗಳು, ಮಹಿಳಾ ಪ್ರಮುಖರು, ಹೋರಾಟಗಾರರು ಸಭೆಯಲ್ಲಿ ಜಿಲ್ಲಾ ಉತ್ಸವ ಯಶಸ್ಸಿಗೆ ಸಲಹೆ ನೀಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ. ,ಮಹಾನಗರ ಪಾಲಿಕೆ ಪೌರಾಯುಕ್ತ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ,ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಸೇರಿ…

ರಾಯಚೂರು ಉತ್ಸವ: ಎರಡು ದಿನಗಳ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ರಾಯಚೂರು ಜ. 08: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಹಿನ್ನೆಲೆ ಜನವರಿ 08 ಮತ್ತು ಜನವರಿ 9ರಂದು ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಚಾಲನೆ ನೀಡಿದರು. ಪುರುಷರಿಗೆ ಪುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕ್ರಿಕೆಟ್, ಬ್ಯಾಸ್ಕೆಟ್‌ಬಾಲ್ ಇತರೆ ಗುಂಪು ಕ್ರೀಡೆಗಳು ಹಾಗೂ ವೈಯಕ್ತಿಕ ಕ್ರೀಡೆಗಳಾದ ಚೆಸ್, ಓಟ, ಈಜು, ಗುಂಡು ಎಸೆತ ಸೇರಿದಂತೆ ಇತರ…

ರಾಯಚೂರು ಜಿಲ್ಲಾ ಕ್ರೀಡೋತ್ಸವಕ್ಕೆ ಚಾಲನೆ

ರಾಯಚೂರು ಜಿಲ್ಲಾಡಳಿತದಿಂದ ಜನವರಿ 29, 30 ,31ರಂದು ಮೂರು ದಿನ ಕಾಲ ರಾಯಚೂರು ಜಿಲ್ಲಾ ಉತ್ಸವ ಹಮ್ಮಿಕೊಳ್ಳಲಾಗಿದೆ.‌ ಜಿಲ್ಲಾ ಉತ್ಸವದ ಅಂಗವಾಗಿ ಕ್ರೀಡೋತ್ಸವದ ಮೊದಲ ಕ್ರಿಕೆಟ್ ಪಂದ್ಯಕ್ಕೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಎನ್.ಎಸ್.ಬೋಸರಾಜು ಚಾಲನೆ ನೀಡಿದರು. ರಾಯಚೂರು ಉತ್ಸವದ ಪ್ರಚಾರಾರ್ಥ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಂತರ ಇಲಾಖೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
Raichur Reporters Guild

ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ

ಬಂಡವಾಳ ಶಾಹಿಗಳಿಂರ ಮಾಧ್ಯಮ ಖರೀದಿ, ನಿರ್ಭೀತಿ ವರದಿ ಕಷ್ಟ- ಎನ್ ಎಸ್ ಬೋಸರಾಜು ರಾಯಚೂರು, ಡಿ.28- ದೇಶ ಮತ್ತು ವಿದೇಶದ ಯಾವುದೇ ಕಾರ್ಪೊರೇಟ್ ವಲಯ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರ ಖರೀದಿಸಿದ್ದು ಹಿಂದಿನಂತೆ ಪತ್ರಕರ್ತರು ಮುಕ್ತವಾಗಿ ಬರೆದು ಪಾವಿತ್ರತೆ ಉಳಿಸುವ ಅಗತ್ಯವಿದೆ ಎಂದು ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಹೇಳಿದರು. ಅವರಿಂದು ನಗರದ ರಾಯಚೂರು ರಿಪೋರ್ಟರ್ ಪತ್ರಕರ್ತರ ಗಿಲ್ಡ್ ಸಭಾಂಗಣದಲ್ಲಿ…

ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ,

ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಡತೆ- ಪುರುರಾಜ ಸಿಂಗ್ ಸೋಲಂಕಿ. ರಾಯಚೂರು,ಡಿ.25- ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಡತೆ ಸಾಧ್ಯವೆಂದು ಪ್ರೋಬೆಷನರಿ ಐಎಎಸ್ ಅಧಿಕಾರಿ ಪುರುರಾಜ ಸಿಂಗ್ ಸೋಲಂಕಿ ಹೇಳಿದರು. ಅವರಿಂದು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಯಚೂರು ರಿಪೋರ್ಟ್ಸ್ ಗಿಲ್ಡ್ ಹಾಗು ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ…
Raichur Reporters Guild

ರಾಯಚೂರು ರಿಪೋಟರ‍್ಸ್ ಗಿಲ್ಡ್ ನಿಂದ ಡಿಸೆಂಬರ್ 28ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ

ಪತ್ರಿಕಾ ಪ್ರಕಟಣೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ರಾಯಚೂರು ರಿಪೋರ್ಟರ್‌ಸ್‌ ಗಿಲ್‌ಡ್‌ ರಾಯಚೂರು (ರಿ) ರಾಯಚೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಯಚೂರು ಕರ್ನಾಟಕ ಸರಕಾರ ಹಾಗೂ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘ ರಾಯಚೂರು ಜಿಲ್ಲಾಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 28-12-2025ರಂದು ಬೆಳಿಗ್ಗೆ 10:30 ಕ್ಕೆ ಪತ್ರಿಕಾ ಭವನದ ಸಭಾಂಗಣದಲ್ಲಿ ರಾಷ್ಟ್ರೀಯ ಪತ್ರಿಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ…