ಪತ್ರಕರ್ತರ ತುರ್ತು ನಿಧಿ

ಪತ್ರಕರ್ತರ ಕ್ಷೇಮಾಭಿವೃದ್ಧಿ ಕಾರ್ಯಕ್ರಮಗಳು

  • Home
  • Blog Standard
  • ಪತ್ರಕರ್ತರ ಕ್ಷೇಮಾಭಿವೃದ್ಧಿ ಕಾರ್ಯಕ್ರಮಗಳು

ಎಸ್‌ಎಸ್ ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

– ನಗರದ ಪತ್ರಕರ್ತರಿಗೆ ಗಿಲ್ಡ್ ನಿಂದ ಯಶಸ್ವಿನಿ ಆರೋಗ್ಯ ಕಾರ್ಡ್ ವಿತರಣೆ ರಾಯಚೂರು,ಮೇ22: ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಪತ್ರಕರ್ತರ ಸಂಘಗಳು ಸರಕಾರದ ಮೇಲೆ ಒತ್ತಡ ಹಾಕಬೇಕು ಎಂದು ರಾಯಚೂರು ಪ್ರಭಾ ದಿನ ಪತ್ರಿಕೆ ಸಂಪಾದಕರಾದ ಸುಶೀಲೇಂದ್ರ ಸೋದೆಗಾರ ಸಲಹೆ ನೀಡಿದರು. ರಾಯಚೂರು ರಿಪೋರ್ಟರ್ಸ್ ಗಿಲ್ಡ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಎಸ್‌ಎಸ್ ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ…

ಮಹಾನಗರ ಪಾಲಿಕೆ 2026-27 ನೇ ಸಾಲಿನ ಬಜೆಟ್‌ನಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಅನುದಾನ ಮೀಸಲಿಡಲು ಮನವಿ

ರಾಯಚೂರು ಮಹಾನಗರ ಪಾಲಿಕೆ 2026-27 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಹಿನ್ನೆಲೆ ರಾಯಚೂರು ನಗರದ ಎಲ್ಲಾ ಪತ್ರಕರ್ತರಿಗೆ ಆರೋಗ್ಯ ವಿಮೆ ಹಾಗೂ ತುರ್ತು ನಿಧಿಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡಲು ಕೋರಿ ಮಹಾನಗರ ಪಾಲಿಕೆ ಆಯುಕ್ತರು, ಆಡಳಿತಾಧಿಕಾರಿಗಳಾದ ಜುಬಿನ್ ಮೊಹಾಪಾತ್ರ ಅವರಿಗೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು. ಈ ಹಿಂದಿನ ಮೇಯರ್ ನರಸಮ್ಮ ನರಸಿಂಹಲು ಮಾಡಗಿರಿ ಅಧ್ಯಕ್ಷತೆ ಹಾಗೂ ಪೌರಾಯುಕ್ತರ ಉಪಸ್ಥಿತಿಯಲ್ಲಿ ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ…

ಹಿರಿಯ ಪತ್ರಕರ್ತ ದಿ. ಸೈಯದ್ ಅಶ್ರಫ್ ಕುಟುಂಬಕ್ಕೆ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ನಿಂದ 1 ಲಕ್ಷ ರೂ. ನೆರವು

ರಿಪೋರ್ಟರ‌್ಸ್ ಗಿಲ್ಡ್ ಕಾರ್ಯ ಶ್ಲಾಘನೀಯ – ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ರಾಯಚೂರು, ಫೆ.16: ಇತ್ತೀಚೆಗೆ ನಿಧನರಾದ ರಾಯಚೂರಿನ ಹಿರಿಯ ಪತ್ರಕರ್ತ ಸೈಯದ್ ಅಶ್ರಫ್ ಅವರ ಕುಟುಂಬಕ್ಕೆ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್‌ನ ಪತ್ರಕರ್ತರ ತುರ್ತು ನಿಧಿಯಿಂದ 1 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು. ನಗರದ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್ ‌ನ‌‌ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಮೃತರ ಕುಟುಂಬಕ್ಕೆ 1 ಲಕ್ಷ…

ರಾಯಚೂರು ರಿಪೋರ್ಟರ‌್ಸ್ ಗಿಲ್ಡ್ ಕ್ಯಾಲೆಂಡರ್-2026 ಬಿಡುಗಡೆ

ರಾಯಚೂರು ಜ.15: ರಾಯಚೂರು ರಿಪೋರ್ಟರ್ಸ್ ಗಿಲ್ಡ್ ನ ವಾರ್ಷಿಕ ಕ್ಯಾಲೆಂಡರ್-2026 ನ್ನ ಹಿರಿಯ ಪತ್ರಕರ್ತ ಹಾಗೂ ಗಿಲ್ಡ್ ನ ಮಾಜಿ ಅಧ್ಯಕ್ಷರಾದ ಸುರೇಂದ್ರಾಚಾರ್ಯ ಕೊರ್ತಕುಂದ ಮತ್ತು ಹಿರಿಯ ಪತ್ರಕರ್ತ ಹಾಗೂ ಗಿಲ್ಡ್‌ನ ಸಂಸ್ಥಾಪಕ ಸದಸ್ಯರಾದ ರಘುನಾಥ ರೆಡ್ಡಿ ಮನ್ಸಲಾಪುರ ಅವರು ಬಿಡುಗಡೆಗೊಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್‌ನ ಉಪಾಧ್ಯಕ್ಷ ಎಂ. ಜಯರಾಮ ವಹಿಸಿದ್ದರು. ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷರಾದ…